*ಕಾಶ್ಮೀರದ ನಿಜವಾದ ಸಮಸ್ಯೆಗೆ ನೆಹರೂ ಕಾರಣ: ಟೆಂಗಿನಕಾಯಿ*
ಹುಬ್ಬಳ್ಳಿ: ಕಾಶ್ಮೀರದ ಪೆಹಲ್ಗಾಮ್’ನಲ್ಲಿ ಪ್ರವಾಸಿಗರ ಮೇಲಿನ ಭಯೋತ್ಪಾದಕರ ದಾಳಿಯನ್ನು ಇಡೀ ದೇಶವೇ ಖಂಡಿಸಿದೆ.ಪ್ರಧಾನಿಗಳ ನಿರ್ಣಯಗಳಿಗೆ ವಿರೋಧ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸಹಿತ ಎಲ್ಲ ವಿಪಕ್ಷಗಳು ಸಹಮತ ಸೂಚಿಸಿದ್ದು, ಹೀಗಿರುವಾಗ ರಾಜ್ಯದ ಸಚಿವ ಪ್ರಧಾನಿ ನರೇಂದ್ರ ಮೋದಿ ಅವರ ರಾಜೀನಾಮೆ ಕೇಳುತ್ತಿರುವುದು ಹಾಸ್ಯಾಸ್ಪದ ಹಾಗೂ ಖಂಡನೀಯ ಎಂದು ಬಿಜೆಪಿ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆಹಲ್ಗಾಮ್ ದಾಳಿ ದೇಶದಲ್ಲಿ ಚರ್ಚೆಯ ವಿಷಯವಾಗಿದೆ ಆದರೆ ಸಚಿವ ಸಂತೋಷ ಲಾಡ್ ಹಾಗೂ ಕಾಂಗ್ರೆಸ್ ವಕ್ತಾರರು ಭದ್ರತಾ ವೈಫಲ್ಯದ ಬಗ್ಗೆ ಸಂಶಯ ಬಗ್ಗೆ ಕೇಳಿಕೆ ಕೊಟ್ಟಿದ್ದಾರೆ. ಕಾಶ್ಮೀರದ ಸಮಸ್ಯೆ ಬಗ್ಗೆ ಲಾಡ್ ಅವರು ಅರ್ಥ ಮಾಡಿಕೊಳ್ಳಬೇಕು, ಇದನ್ನು ಅವರೇ ಆತ್ಮಾವಲೋಕನ ಮಾಡಿಕೊಳ್ಳಬೇಕು, ಕಾಶ್ಮೀರದಲ್ಲಿನ ಸಮಸ್ಯೆಗಳಿಗೆ ಕಾಂಗ್ರೆಸ್’ನ ನೆಹರೂ ಅವರೇ ಕಾರಣ ಆಗಿದ್ದಾರೆ ಎಂದು ಹೇಳಿದರು.
ಇದೀಗ ಮೋದಿ ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದು ಹಾಕಿ, ಅದ್ಬುತ ಬೆಳವಣಿಗೆ ಮಾಡುತ್ತಿದ್ದಾರೆ, ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ, ಅಭಿವೃದ್ಧಿ ಕಾರ್ಯ ನಡೆಯುತ್ತಿದೆ, ಇದನ್ನು ಸಹಿಸದ ಇಸ್ಲಾಮಿಕ್ ಭಯೋತ್ಪಾದಕರು ದಾಳಿ ಮಾಡಿದ್ದಾರೆ, ಇದರ ಬಗ್ಗೆ ಲಾಡ್ ಅವರು ಮಾತನಾಡಬೇಕಿತ್ತು, ಲಾಡ್ ಯಾವ ನೈತಿಕತೆ ಇಟ್ಟುಕೊಂಡು ಪ್ರಧಾನಿಗಳ ರಾಜೀನಾಮೆ ಕೇಳುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದರು.
2004 ರಿಂದ 2014 ರವರೆಗೆ ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ದೆಹಲಿ, ವಾರನಾಸಿ, ಮುಂಬೈ, ಹೈದರಾಬಾದ್, ಜೈಪುರ, ಅಹಮದಾಬಾದ್, ಮುಂಬೈ, ಪುಣೆ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಉಗ್ರರ ದಾಳಿ ನಡೆದಿವೆ, ಇದರಲ್ಲಿ ನೂರಾರು ಜನರ ಸಾವಾಗಿವೆ. ಅದೇ ತರಹ ಲಾಡ್ ಅವರು ಸಹ ಬಿಜೆಪಿ ಆಡಳಿತ ಅವಧಿಯಲ್ಲಿ ಏನಾಗಿದೆ ಎಂಬುದನ್ನು ಅಂಕಿಸಂಖ್ಯೆಗಳ ಸಮೇತ ದಾಖಲೆಗಳನ್ನು ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.
ಲಾಡ್ ಅವರಿಗೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ಕಾರ್ಯ ವೈಖರಿ ತೃಪ್ತಿ ತಂದಿಲ್ಲ ಅನಿಸುತ್ತದೆ, ಹೀಗಾಗಿ ಅವರೇ ಕೇಂದ್ರದ ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಲಿ, ಈ ಮೂಲಕ ತಮ್ಮ ಜಾಣ್ಮೆಯನ್ನು ಪ್ರದರ್ಶಿಸಲಿ ಎಂದರು.
ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್, ರಾಜು ಕಾಳೆ, ಮಂಜುನಾಥ ಕಾಟಕರ್, ವಕ್ತಾರ ರವಿ ನಾಯಕ ಗೋಷ್ಠಿಯಲ್ಲಿ ಇದ್ದರು.
ಮಹತ್ವದ ಸುದ್ದಿ
ಹೊಸದಿಲ್ಲಿ : ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆಯಿಂದ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ಭಾರತೀಯ ಸೇನೆಯೂ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ತಿಳಿದುಬಂದಿದೆ.