*ದುರ್ಮರಣಕ್ಕೆ ಒಳಗಾದವರು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರು/ ಕಿರೇಸೂರ ಬಳಿ ಅವಘಡ*
ಹುಬ್ಬಳ್ಳಿ: ಕಾರೊಂದಕ್ಕೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಕಿರೇಸೂರು ಗ್ರಾಮದ ಬಳಿಯ ಇಂಗಳಹಳ್ಳಿ ಕ್ರಾಸ್ ಹತ್ತಿರ ನಡೆದಿದೆ.
ಅಪಘಾತದಲ್ಲಿ ಶ್ವೇತಾ(29), ಅಂಜಲಿ(26), ಸಂದೀಪ್ (26), ವಿಠಲ್ (55) ಹಾಗೂ ಶಶಿಕಲಾ (40) ಎಂಬುವರು ಮೃತಪಟ್ಟಿದ್ದು ಇವರುಗಳು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರು ಎಂದು ಹೇಳಲಾಗಿದೆ. ಮೃತ ದೇಹಗಳನ್ನು ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಗೆ ಕಳುಹಿಸಲಾಗಿದೆ.
ಮೃತರು ಹೋಟೆಲ್ ವ್ಯವಹಾರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದರು ಎಂದು ಗ್ರಾಮೀಣ ಠಾಣೆಯ ಪೊಲೀಸರು ಹೇಳಿದ್ದಾರೆ.. ಸ್ಥಳಕ್ಕೆ ಎಸ್.ಪಿ. ಡಾ.ಗೋಪಾಲ ಬ್ಯಾಕೋಡ್ ಮತ್ತು ಸಿಪಿಐ ಮುರುಗೇಶ ಚನ್ನಣ್ಣವರ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನವಲಗುಂದ ಕಡೆಯಿಂದ ಬರುತ್ತಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಕಾರಿನಲ್ಲಿ ಐವರು ಸಾವನ್ನಪ್ಪಿದ್ದು ,ಲಾರಿ ಚಾಲಕ ಪರಾರಿಯಾಗಿದ್ದಾನೆ.