ಹುಬ್ಬಳ್ಳಿ : ಉತ್ತರ ಕರ್ನಾಟಕದ ಹೆಚ್ಚಿನ ಕಲಾವಿದರುಗಳು ಅಭಿನಯಿಸಿರುವ ಶ್ರೀ ಶಿವಶಕ್ತಿ ಸಿನಿ ಕಂಬೈನ್ಸ್ ಬ್ಯಾನರ್ ನ ಅಡಿಯಲ್ಲಿ ನಿರ್ಮಾಣ ಮಾಡಿರುವ ಪ್ರಪ್ರಥಮ ಕನ್ನಡ ಚಲನಚಿತ್ರ “ಕರಾಸ್ತ್ರ” ಜೂನ್ 13 ರಂದು ರಾಜ್ಯಾದ್ಯಂತ ಬಿಡುಗಡೆಗೆಯಾಗಲಿದೆ.
ನಿರ್ದೇಶಕ,ನಟ ಬ್ಯಾಡಗಿಯ ಮೂಲದ ನಾರಾಯಣ ಪೂಜಾರ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿ,ದ್ವಾಪರ ಯುಗದಲ್ಲಿ ಆದಂತಹ ಸಮಸ್ಯೆಗೆ ಕಲಿಯುಗದಲ್ಲಿ ಪರಿಹಾರ ಹುಡುಕಲು ಬಂದ ನಾಯಕಿ ಸಮಸ್ಯೆ ಬಗೆಹರಿಸುತ್ತಾಳೆಯೋ ಇಲ್ಲವೋ ಎಂಬ ಕತೆಯ ಎಳೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಈ ಸಿನಿಮಾ ಕೌಟುಂಬಿಕ, ಭಾವನಾತ್ಮಕ ಹಾಗೂ ಸಾಹಸಮಯವಾಗಿದ್ದು, ಇತ್ತೀಚಿಗೆ ಹೆಣ್ಣು ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯಗಳ ಬಗ್ಗೆ ಬೆಳಕು ಚೆಲ್ಲುವ ಯತ್ನ ಎಂದರು.
ಇದರಲ್ಲಿನ ಮುಖ್ಯ ಪಾತ್ರದಲ್ಲಿ ಹುಬ್ಬಳ್ಳಿ , ಗದಗ, ಹಾವೇರಿ ಮೂಲದ ರಿಯಲ್ ಕರಾಟೆ ಪಟುಗಳು ಮತ್ತು ನಾಲ್ವರು ರಂಗಭೂಮಿ ಕಲಾವಿದರು ಇದ್ದಾರೆ. ಕತೆ,ಚಿತ್ರಕತೆ, ಸಾಹಿತ್ಯ ಮತ್ತು ನಿರ್ಮಾಣದ ಜವಾಬ್ದಾರಿಯನ್ನು ನಾನೇ ನಿರ್ವಹಿಸಿದ್ದು.
ಸಹಾಯಕ ನಿರ್ದೇಶಕರಾಗಿ ಪವನ್ ಕುಲಕರ್ಣಿ.ಸತೀಶ ಕ್ಯಾತಘಟ್ಟ,ಕಣಿವೆಪ್ಪ .ಬಿ, ಕೆಲಸ ಮಾಡಿದ್ದಾರೆ.
ಛಾಯಾಗ್ರಹಣವನ್ನು ಶರಣು ಸುಗ್ನಳ್ಳಿ, ಲಕ್ಷ್ಮಣ, ಮೈಲಾರಿ ಗಗನ , ಸ್ಥಿರಚಿತ್ರಣ ವಿನ್ಸೆಂಟ್ ಪರೇರಾ , ಸಂಕಲನ ಶರಣು ಸುಗ್ನಳ್ಳಿ, ಅಮೀತ ಬಳ್ಳಾರಿ, ಸಂಗೀತ ಮಹಾರಾಜ್ , ಹಿನ್ನೆಲೆ ಸಂಗೀತ ರಾಜ್ ಭಾಸ್ಕರ್, ಸಾಹಸ ಕರಾಟೆ ಮಂಜು,ಶಂಕರ ಶಾಸ್ತ್ರೀ , ನೃತ್ಯ ವಿನಾಯಕ, ಕಲಾ ನಿರ್ದೇಶನ ಶಾಂತಯ್ಯ ಪರಡಿಮಠ, ವಸ್ತ್ರಾಲಂಕಾರ ಹಾಗೂ ಪ್ರಸಾಧನವನ್ನು ಬಿ.ಎಚ್.ನಯನಾ ನಿರ್ವಹಿಸಿದ್ದಾರೆ.
ಮುಖ್ಯ ಪಾತ್ರವರ್ಗದಲ್ಲಿ ನಾರಾಯಣ ಪೂಜಾರ, ಶ್ರೀನಿವಾಸ್ ಹುಲ್ಕೋಟಿ, ಕ್ಷಿತಿ ವೀರಣ್ಣ, ಮನೀಷಾ ಕಬ್ಬೂರ, ಬೇಬಿ ಕೃಷ್ಣವೇಣಿ, ಬೇಬಿ ಸಾಕ್ಷಿ, ಕಾರ್ತಿಕ ಪೂಜಾರ, , ಹನುಮಂತ, ಮಾಲತೇಶ ಸುಂಕದ, ಅಬ್ದುಲ್ ಮುನ್ನಾ ಎರೇಸೀಮೆ, ಬಸವರಾಜ ಹೊಂಬಾಳಿ, ಭುವನಾ, ವಿದ್ಯಾ ಬೆಳಗಾಂವ, ಹೀತೇಶ, ವಿಜಯಕುಮಾರ ನಾಗರತ್ನ ಮೊದಲಾದ ಕಲಾವಿದರು ನಟಿಸಿದ್ದಾರೆ.
ಗೋಷ್ಠಿಯಲ್ಲಿ ನಟರಾದ ಮನೀಷಾ ಕಬ್ಬೂರು, ವಿನೋದ್ ಭಾಂಡಗೆ, ವಾಣಿ, ವಸಂತ ಕಡತಿ ಹಾಗೂ ಹಾಗೂ ಪಿಆರ್ ಡಾ.ಪ್ರಭು ಗಂಜಿಹಾಳ ಪಾಲ್ಗೊಂಡಿದ್ದರು