ಹುಬ್ಬಳ್ಳಿ: ಸ್ಥಳೀಯ ಅಧ್ಯಾಪಕನಗರದ ಐದು ವರ್ಷದ ಬಾಲಕಿ ಅಪಹರಿಸಿ ಅತ್ಯಾಚಾರ, ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ರಿತೇಶ್ ಕುಮಾರ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ.
ಪೈಶಾಚಿಕ ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ.
ಬಾಲಕಿಯನ್ನು ಶೆಡ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದಾಗ ಬಾಲಕಿ ಕೂಗಾಟ ಕಂಡು ಶೆಡ್ ನತ್ತ ಸ್ಥಳೀಯರು ಧಾವಿಸಿದ್ದಾರೆ.ಸ್ಥಳೀಯರು ಧಾವಿಸುತ್ತಿದ್ದಂತೆ ಕಿರಾತಕ ಹೆದರಿ ಪರಾರಿಯಾಗಿದ್ದಾನೆ.
ಪೈಶಾಚಿಕ ಕೃತ್ಯ ಎಸಗಿದವನ ಬಂಧನಕ್ಕೆ
ತನಿಖೆಗೆ ಇಳಿದ ಪೊಲೀಸರಿಗೆ ಆರೋಪಿ ಬಿಹಾರ ಮೂಲದ ರಿತೇಶ್ ಕುಮಾರ್ ಇರುವ ಜಾಗ ಪತ್ತೆಯಾಗಿತ್ತು.
ಈ ವೇಳೆ ಪೊಲೀಸರು ಆರೋಪಿಯನ್ನು ಬಂಧಿಸಲು ಮುಂದಾದಾಗ ಪೊಲೀಸರ ಮೇಲೆ ರಿತೇಶ್ ಕುಮಾರ್ ಹಲ್ಲೆಗೆ ಯತ್ನಿಸಿದ್ದು ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದರು. ಪೊಲೀಸರು ಹಾರಿಸಿದ ಗುಂಡುಗಳು ಆರೋಪಿಯ ಕಾಲು ಮತ್ತು ಎದೆಯ ಭಾಗಕ್ಕೆ ನುಗ್ಗಿದ್ದರಿಂದ ಅಲ್ಲೆ ಕುಸಿದುಬಿದ್ದು ಸಾವನ್ನಪ್ಪಿದ್ದು ಖಾಕಿ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಬಾಲಕಿಯ ತಂದೆ ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ನಡೆದಿತ್ತು. ಬಾಲಕಿ ತಾಯಿ ಮನೆಯೊಳಗೆ ಕೆಲಸ ಮಾಡುತ್ತಿದ್ದು ಹೊರಗೆ ಮಗು ಆಟವಾಡುತ್ತಿತ್ತು. ಇದನ್ನು ಗಮನಿಸಿದ ರಿತೇಶ್ ಕುಮಾರ್ ಚಾಕಲೇಟ್ ಕೊಡುವ ಆಸೆ ತೋರಿಸಿ ಬಾಲಕಿಯನ್ನು ಅಪಹರಿಸಿದ್ದ. ಆರೋಪಿಯ ಚಲನವಲನಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಮಗಳು ಕಾಣೆಯಾಗಿದ್ದಾಳೆಂದು ತಾಯಿಗೆ ತಿಳಿದಾಗ, ಆಕೆ ಸ್ಥಳೀಯರೊಂದಿಗೆ ಸೇರಿ ಆಕೆಗಾಗಿ ಹುಡುಕಾಟ ಆರಂಭಿಸಿದರು. ಬಾಲಕಿಯ ಪೋಷಕರು ಕೊಪ್ಪಳದವರಾಗಿದ್ದು, ಪೇಂಟಿಂಗ್ ಕೆಲಸಕ್ಕಾಗಿ ಹುಬ್ಬಳ್ಳಿಗೆ ಬಂದಿದ್ದರು ಸ್ಥಳೀಯರ ಪ್ರಕಾರ, ನಿರ್ಮಾಣ ಹಂತದ ಕಟ್ಟಡದ ಬಳಕೆಯಾಗದ ಶೌಚಾಲಯದಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು.
ಶವ ಪತ್ತೆಯಾದ ಕೂಡಲೇ ಸ್ಥಳೀಯರು, ವಿಶೇಷವಾಗಿ ಮಹಿಳೆಯರು ಅಶೋಕ್ ನಗರ ಪೊಲೀಸ್ ಠಾಣೆಯ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ನಗರ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಠಾಣೆಗೆ ಭೇಟಿ ನೀಡಿ ಪ್ರತಿಭಟನಾ ನಿರತ ಜನರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಇನ್ನು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಸ್ಥಳೀಯರು ಆರೋಪಿಯನ್ನು ಗುರುತಿಸಿದ್ದರು. ಇದರ ಆಧಾರದ ಮೇಲೆ ಮೇಲೆ ಪೊಲೀಸರು ಕಾರ್ಯಾಚರಣೆಗೆ ಇಳಿದ್ದರು.
ಅಶೋಕ ನಗರದಲ್ಲಿ ಬಾಲಕಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನರು ಹಾಗೂ ಪಾಲಕರ ಆಕ್ರೋಆ ಮುಗಿಲು ಮುಟ್ಟಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿತ್ತಿರುವ ಸಾರ್ವಜನಿಕರು ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದರು.
ಠಾಣೆಗೆ ಭೇಟಿ ನೀಡಿದ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರಿಗೆ ಸುತ್ತಿವರೆದ ಮಹಿಳೆಯರು ಆರೋಪಿಗೆ ಕಠಿಣ ಶಿಕ್ಷೆ ಕೊಡುವಂತೆ ಒತ್ತಾಯಿಸಿದರು. ಇದೇ ವೇಳೆ ಮಾತನಾಡಿದ ಎನ್ ಶಶಿಕುಮಾರ್, ಕೊಪ್ಪಳ ಮೂಲದ ಕುಟುಂಬ ಮನೆಗೆಲಸ ಪೇಟಿಂಗ್ ಕೆಲಸ ಮಾಡುತ್ತಿತ್ತು. ತಂದೆ ಪೇಟಿಂಗ್ ಕೆಲಸ ಮಾಡುತ್ತಿದ್ದ. ತಾಯಿ ಇಂದು ಬೆಳಗ್ಗೆ ಕೆಲಸಕ್ಕೆ ಹೋಗಿದ್ದಳು.
ಮಗುವನ್ನು ಕರೆದುಕೊಂಡು ಹೋಗಿದ್ದಳು. ಮನೆಕೆಲಸಕ್ಕೆ ಹೋದಾಗ ಮಗುವನ್ನು ಕರೆದುಕೊಂಡು ಹೋಗಿದ್ದಳು.
ತಾಯಿ ಮನೆಯೊಳಗೆ ಕೆಲಸ ಮಾಡುತ್ತಿದ್ದಳು. ಈ ಸಮಯದಲ್ಲಿ ಮಗುವನ್ನು ಯುವಕನೋರ್ವ ಎತ್ತಿಕೊಂಡು ಹೋಗಿದ್ದ.
ಪಾಳು ಬಿದ್ದ ಕೋಣೆಯಲ್ಲಿ ಮಗುವಿನ ಶವ ಪತ್ತೆಯಾಗಿದೆ.
ಆರೋಪಿ ಹಿನ್ನೆಲೆ ಇನ್ನು ಗೊತ್ತಾಗಿಲ್ಲ.ರೇಪ್ ಬಗ್ಗೆ ಇನ್ನು ಮಾಹಿತಿ ಇಲ್ಲಮ ವೈದ್ಯಕೀಯ ತಪಾಸಣೆ ನಂತರ ಅತ್ಯಾಚಾರ ಬಗ್ಗೆ ಗೊತ್ತಾಗಲಿದೆ. ಈ ಬಗ್ಗೆ ಕುಟುಂಬ ದೂರು ನೀಡುತ್ತಿದೆ. ಆರೋಪಿ ವಿರುದ್ಧ ಕಠೀಣ ಕ್ರಮ ಕೈಗೊಳ್ಳುತ್ತೇವೆ. ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದರು.