ಬೆಂಗಳೂರು,13 : ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಹಿರಿಯ ಐಪಿಎಸ್ ಅಧಿಕಾರಿ ರಾಮಚಂದ್ರರಾವ್ ಮಲಮಗಳು,ನಟಿ ರನ್ಯಾ ರಾವ್ ಮನೆ ಮೇಲೆ ಇ.ಡಿ ದಾಳಿ ನಡೆಸಿದೆ.
ಒಂದೆಡೆ ಡಿ.ಆರ್.ಐ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ಇನ್ನೊಂದೆಡೆ ನಂದವಾಣಿ ಮ್ಯಾನ್ಸನ್ ಸೇರಿದಂತೆ 6 ಕಡೆ ಇಡಿ ದಾಳಿ ಮಾಡಿದೆ.ಪ್ರಕರಣ ಸಂಬಂಧ ದೆಹಲಿಯಲ್ಲಿ ಇಸಿಐಆರ್ ಆಗಿದ್ದು ಈ ಹಿನ್ನೆಲೆಯಲ್ಲಿ ದೆಹಲಿ ತಂಡದಿಂದ ಬೆಂಗಳೂರಿನಲ್ಲಿ ದಾಳಿ ನಡೆಸಲಾಗಿದೆ.
ರನ್ಯಾ ಪತಿ ಜತಿನ್ ಹುಕ್ಕೇರಿ ನಿವಾಸ, ರನ್ಯಾ ಮತ್ತು ಗೆಳೆಯ ತರುಣ್ಗೆ ಸೇರಿದ ಜಾಗ ಹಾಗೂ ಕೋರಮಂಗಲ, ಇಂದಿರಾನಗರ ಸೇರಿದಂತೆ 9 ಕಡೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.ಆಡುಗೋಡಿ ಬಳಿ ರನ್ಯಾ ರಾವ್ ಅವರ ಪತಿ ನಿವಾಸದ ಮೇಲೆ ಡಿಆರ್ಐ ಅಧಿಕಾರಿಗಳು ದಾಳಿ ನಡೆಸಿದ್ದರು.
ಡಿಆರ್ಐ ವಿಚಾರಣೆ ವೇಳೆ ಯೂಟ್ಯೂಬ್ ನೋಡಿ ಚಿನ್ನ ಇಟ್ಟುಕೊಳ್ಳುವುದನ್ನು ಕಲಿತಿದ್ದೇನೆ, ಹಾಗೂ ಇದೇ ಮೊದಲ ಬಾರಿಗೆ ದುಬೈನಿಂದ ಚಿನ್ನ ತಂದಿರುವುದಾಗಿ ರನ್ಯಾ ಹೇಳಿದ್ದಾಳೆ.
ರಾಮಚಂದ್ರರಾವ್ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ.