ಡೆಹ್ರಾಡೂನ್ : ಅಹಮದಾಬಾದ್ ಭೀಕರ ವಿಮಾನ ದುರಂತ ಮಾಸುವ ಮುನ್ನವೇ ಇಂದು ಬೆಳಿಗ್ಗೆ 5:20ರ ಸುಮಾರಿಗೆ ಶ್ರೀ ಕೇದಾರನಾಥ ಧಾಮದಿಂದ ಗುಪ್ತಕಾಶಿಗೆ ಹೋಗುತ್ತಿದ್ದ ಹೆಲಿಕಾಪ್ಟರ್ ಗೌರಿಕುಂಡ್ ಬಳಿ ಪತನಗೊಂಡು ಏಳು ಮಂದಿ ಸಾವನ್ನಪ್ಪಿದ್ದಾರೆ.
ಗೌರಿಕುಂಡ ಅರಣ್ಯದಲ್ಲಿ ಹೆಲಿಕ್ಯಾಪ್ಟರ್ ಪತನವಾಗಿದ್ದು ಅದರಲ್ಲಿ ಓರ್ವ ಮಗು ಸೇರಿದಂತೆ 7 ಜನರು ಪ್ರಯಾಣಿಸುತ್ತಿದ್ದರು.ಪೈಲಟ್ ,(5 ವಯಸ್ಕರು ಮತ್ತು 1 ಮಗು ಸೇರಿದಂತೆ ಪ್ರಯಾಣಿಕರು ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಗುಜರಾತ್ ದೇವರು ಎನ್ನಲಾಗಿದೆ.ಘಟನೆಯಲ್ಲಿ ಎಲ್ಲರೂ ದುರ್ಮರಣ ಹೊಂದಿದ್ದು ಘಟನೆ ಕುರಿತಂತೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಾಗಿದೆ .
ಪರಿಹಾರ ಮತ್ತು ರಕ್ಷಣಾ ಕಾರ್ಯದ ದೃಷ್ಟಿಯಿಂದ, ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ತಂಡಗಳನ್ನು ಘಟನೆಯ ಸ್ಥಳಕ್ಕೆ ರವಾನಿಸಲಾಗಿದೆ.
ಕಳೆದ ಎರಡು ದಿನಗಳ ಹಿಂದೆ ಅಷ್ಟೇ ಗುಜರಾತಿನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು ಇದುವರೆಗೂ 274 ಜನರು ಸಾವನ್ನಪ್ಪಿದ್ದನ್ನು ಸ್ಮರಿಸಬಹುದಾಗಿದೆ . ಈ ಘಟನೆ ಮಾಸುವ ಮುನ್ನವೆ ಮತ್ತೊಂದು ದುರಂತ ಸಂಭವಿಸಿದೆ .