*ಬೆಂಗಳೂರಿನಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆ/ 24ರವರೆಗೆ ಮಳೆ ಮುಂದುವರಿಕೆ ಮುನ್ಸೂಚನೆ*
ಬೆಂಗಳೂರು : ರಾಜ್ಯಾದ್ಯಂತ ಚಂಡಮಾರುತದ ಹಿನ್ನಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು ರಾಜಧಾನಿ
ಬೆಂಗಳೂರಿನಾದ್ಯಂತ ವರುಣನ ಅಬ್ಬರ ತಣ್ಣಗಾಗಿಲ್ಲವಾಗಿದ್ದು, ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಬೆಂಗಳೂರಿನ ಅಪಾರ್ಟ್ಮೆಂಟ್ವೊಂದರಲ್ಲಿ ನೀರು ತುಂಬಿದ್ದ ನೆಲಮಾಳಿಗೆಯಲ್ಲಿ ವೃದ್ಧ ಮತ್ತು ಬಾಲಕ ವಿದ್ಯುತ್ ಆಘಾತದಿಂದ ಮೃತಪಟ್ಟಿದ್ದಾರೆ.
63 ವರ್ಷದ ಮನಮೋಹನ ಕಾಮತ್ ಅವರು ನೆಲ ಮಾಳಿಗೆಯಿಂದ ನೀರನ್ನು ಹೊರಹಾಕಲು ಬಾಹ್ಯ ಮೋಟಾರ್ ಬಳಸುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್ನಿಂದ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಈ ವೇಳೆ ವಿದ್ಯುತ್ ಪ್ರವಾಹಕ್ಕೆ ಸಿಲುಕಿದ ನೆಲಮಾಳಿಗೆಯೊಳಗೆ ನಿಂತಿದ್ದ ದಿನೇಶ (12) ಎಂಬ ಬಾಲಕ ಕೂಡ ವಿದ್ಯುತ್ ಸ್ಪರ್ಶಿಸಿ ಸಾವಗೀಡಾಗಿದ್ದಾನೆ ಎಂದು ಹೇಳಲಾಗಿದೆ. ಬಿಟಿಎಂ 2 ನೇ ಹಂತದ ಮಧುವನ್ ಅಪಾರ್ಟ್ಮೆಂಟ್ನಲ್ಲಿ ಸೋಮವಾರ ಸಂಜೆ 6.15 ರ ಸುಮಾರಿಗೆ ಅವಘಡ ಸಂಭವಿಸಿದೆ. ಇನ್ನೊಂದು ಘಟನೆಯಲ್ಲಿ, ಗೋಡೆ ಕುಸಿದು 35 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಬೆಳಗ್ಗೆ (07.19 ಗಂಟೆ ವರೆಗೆ) ಬರೋಬ್ಬರಿ 135 ಮಿಲಿ ಮೀಟರ್ ಮಳೆ ಆಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಪ್ರಕಟಣೆಯಲ್ಲಿ ತಿಳಿಸಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಸಹ ವ್ಯಾಪಕ ಮಳೆಯಾಗುತ್ತಿದ್ದು ಇಂದು ಹಾಗೂ ನಾಳೆ 21 ರಂದು ರೆಡ್ ಅಲರ್ಟ ಘೋಷಣೆ ಮಾಡಲಾಗದೆ.ತಮಿಳುನಾಡು ಕರಾವಳಿ ಭಾಗದ ಸಮೀಪ ಹವಾಮಾನ ವೈಪರೀತ್ಯ ಉಂಟಾಗಿದ್ದು ಅರಬ್ಬಿ ಸಮುದ್ರಲ್ಲೂ ಇದೇ ರೀತಿಯ ವಾತಾವರಣ ಉಂಟಾದ ಕಾರಣ ಬೆಂಗಳೂರು ಮಾತ್ರವಲದಲೇ, ರಾಜ್ಯಾದ್ಯಂತ ಮಳೆ ಭಾರೀ ಪ್ರಮಾಣದಲ್ಲಿ ಸುರಿಯುತ್ತಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಹಲವಾರು ಪ್ರದೇಶಗಳಿಗೆ ಭಾರತ ಹವಾಮಾನ ಇಲಾಖೆ (ಐಎಂಡಿ) ಹಳದಿ ಎಚ್ಚರಿಕೆ ನೀಡಿದೆ. ಮುಂದಿನ ದಿ. 24ರವರೆಗೆ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ.
ಮತ್ತೊಂದು ಕಡೆ ಮಳೆಯ ಅಬ್ಬರದ ನಡುವೆಯೇ ಹೊಸಪೇಟೆಯಲ್ಲಿ ರಾಜ್ಯ ಸರಕಾರದ ಎರಡು ವರ್ಷದ ಸಾಧನೆ ಸಂಭ್ರಮಾಚರಣೆ ಕಾರ್ಯಕ್ರಮ ನಡೆಯುತ್ರಿದೆ.