*ಅಕ್ಷರ ವ್ಯವಸಾಯಿಗಳ ಅದ್ಧೂರಿ
ಕ್ರೀಡಾಕೂಟಕ್ಕೆ ಬ್ಯಾಟಿಂಗ್ ಮೂಲಕ ಚಾಲನೆ ನೀಡಿದ ಹಾಸನ ಸಂಸದ ಶ್ರೇಯಸ್ ಪಟೇಲ್* / *ವಿವಿಧ ಜಿಲ್ಲೆಗಳ 24 ತಂಡಗಳು ಭಾಗಿ*/ ಮಧ್ಯಾಹ್ನದ ಆಟಕ್ಕೆ ವರುಣನಿಂದ ಅಡ್ಡಿ
ಹಾಸನ: ಹಾಸನದಲ್ಲಿ ಕೆಯುಡಬ್ಲ್ಯೂಜೆ ಏರ್ಪಡಿಸಿದ್ದ ಎರಡು ದಿನದ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಸಂಸದ ಶ್ರೇಯಸ್ ಪಟೇಲ್ ಬ್ಯಾಟಿಂಗ್ ಮಾಡುವ ಮೂಲಕ ಇಂದು ಚಾಲನೆ ನೀಡಿದರು.
ದಿನಂಪ್ರತಿ ಸುದ್ದಿ ಮನೆಯ ಒಳಗೆ, ಅಥವಾ ವಿವಿಧ ಕಾರ್ಯಕ್ರಮಗಳ ಮಧ್ಯೆ ತೊಡಗಿಸಿಕೊಳ್ಳುವ ರಾಜ್ಯದ ಸುಮಾರು ಇಪ್ಪತ್ನಾಲ್ಕು ಜಿಲ್ಲೆಗಳ ಮೂರು ನೂರಕ್ಕೂ ಹೆಚ್ಚು ವರದಿಗಾರರು, ಉಪ ಸಂಪಾದಕರು, ಛಾಯಾಗ್ರಾಹಕರು, ಕ್ಯಾಮೆರಾಮನ್ ಗಳು ಕ್ರಿಕೆಟ್ ಪಂದ್ಯಾಟದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಅನೇಕ ಪಂದ್ಯಗಳು ಹಲವು ರೋಚಕ ಕ್ಷಣಗಳಿಗೆ ಸಾಕ್ಷಿಯಾಯಿತು. ಸಿ
ಮೂರು ಮೈದಾನಗಳಲ್ಲಿ ಪಂದ್ಯಗಳು ನಡೆದವು.
ಸಂಸದ ಶ್ರೇಯಸ್ ಪಟೇಲ್ ಮಾತನಾಡಿ ಸದಾ ಒತ್ತಡದಲ್ಲಿರುವ ಪತ್ರಕರ್ತರು ಒಂದೆಡೆ ಸೇರಿ ಕ್ರಿಕೇಟ್ ಆಡುವ ಮೂಲಕ ಒತ್ತಡ ನೀಗಿಸಿಕೊಳ್ಳುವ ಪ್ರಯತ್ನ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮಾತನಾಡಿ, ಪ್ರತಿ ವರ್ಷವೂ ಪತ್ರಕರ್ತರಿಗಾಗಿಯೇ ಕ್ರೀಡಾಕೂಟ ಆಯೋಜನೆ ಮಾಡಲಾಗುತ್ತಿದೆ. ಈ ಬಾರಿ 24 ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿರುವುದು ವಿಶೇಷ ಎಂದರು.
ರಾಜ್ಯ ಸಮಿತಿ ಸದಸ್ಯ ಎಚ್.ಬಿ.ಮದನಗೌಡ, ಕೆಯುಡಬ್ಲ್ಯೂಜೆ
ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಉಪಾಧ್ಯಕ್ಷರಾದ ಪುಂಡಲೀಕ ಬಾಳೋಜಿ, ಅಜ್ಜಮಾಡ ಕುಟ್ಟಪ್ಪ, ಭವಾನಿಸಿಂಗ್ ಠಾಕೂರ್, ಖಜಾಂಚಿ ವಾಸುದೇವ ಹೊಳ್ಳ, ಕಾರ್ಯದರ್ಶಿಗಳಾದ ಮತ್ತಿಕೆರೆ ಜಯರಾಂ, ಸೋಮಶೇಖರ ಕೆರಗೋಡು, ನಿಂಗಪ್ಪ ಚಾವಡಿ, ಜಿಲ್ಲಾ ಸಂಘದ ಅಧ್ಯಕ್ಷ ವೇಣುಕುಮಾರ್ , ಸಣ್ಣಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷ ಜೆ.ಆರ್.ಕೆಂಚೇಗೌಡ, ಎನ್.ರವಿಕುಮಾರ್, ಗಣಪತಿ ಗಂಗೊಳ್ಳಿ , ಮಹೇಶ ಅಂಗಡಿ,ದೀಪಕ್, ಕೆ.ಆರ್. ದೇವರಾಜ್ , ಸೇರಿದಂತೆ ವಿವಿಧ ಪದಾಧಿಕಾರಿಗಳು ಹಾಜರಿದ್ದರು.
ಮಧ್ಯಾಹ್ನ ಭಾರಿ ಮಳೆಯ ಕಾರಣ ಅನೇಕ ಪಂದ್ಯಗಳು ನಾಳೆಗೆ ಮುಂದೂಡಲ್ಪಟ್ಟವು.