ಅಂಕೋಲಾ : ವೃಕ್ಷ ಮಾತೆ ಖ್ಯಾತಿಯ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿ ಗೌಡ(86) ಅವರು ಇಂದು ವಯೋಸಹಜ ಕಾಯಿಲೆಯಿಂದ ವಿಧಿವಶರಾದರು.
ತಾಲೂಕಿನ ಹೊನ್ನಳ್ಳಿ ಗ್ರಾಮದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದು, ಇವರು ತಮ್ಮ ಜೀವಿತಾವಧಿಯಲ್ಲಿ ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳಸಿ ಪರಿಸರ ಪ್ರೇಮಿ ಎಂದೇ ಖ್ಯಾತವಾಗಿದ್ದರು.
ಮನೆಯಲ್ಲಿ ತೀರಾ ಬಡತನವಿದ್ದೂ ಕುಟುಂಬಕ್ಕಾಗಿ ಕೂಲಿ ಕೆಲಸವನ್ನು ಮಾಡುತ್ತಲೇ ಹಸಿರು ಕ್ರಾಂತಿ ಮೂಲಕ ಅಭೂತಪೂರ್ವ ಸಾಧನೆ ಮಾಡಿದ ತುಳಸಿಗೌಡ ಅವರ ಪರಿಸರ ಪ್ರೇಮವನ್ನು ಮೆಚ್ಚಿ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.
ಹಿಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಂದ ಅವರು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ್ದು,
ಸುಬ್ರಾಯ ಮತ್ತು ಸೋನಿ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.